¶ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
TSK
TSK · ಯೆಶಾಯ 33:6
Treasury of Scripture Knowledge references in ಕನ್ನಡ IRV.
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?
ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
¶ ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.