ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.
TSK
TSK · ಯೆಶಾಯ 34:1
Treasury of Scripture Knowledge references in ಕನ್ನಡ IRV.
ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಯಾವನು ಜಯಹೊಂದುತ್ತಾನೋ ಅವನಿಗೆ›‹ದೇವರ ಪರದೈಸಿನಲ್ಲಿರುವ›‹ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.›