TSK

TSK · ಯೆಶಾಯ 34:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?

ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.

ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.

ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.

ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.

ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”

ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.