ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
TSK
TSK · ಯೆಶಾಯ 34:2
Treasury of Scripture Knowledge references in ಕನ್ನಡ IRV.
ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.
¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.