¶ ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.
TSK
TSK · ಯೆಶಾಯ 36:7
Treasury of Scripture Knowledge references in ಕನ್ನಡ IRV.
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.