ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
TSK
TSK · ಯೆಶಾಯ 37:20
Treasury of Scripture Knowledge references in ಕನ್ನಡ IRV.
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.
ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.
ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
¶ “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.