TSK

TSK · ಯೆಶಾಯ 37:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.

ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.

¶ ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.

ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.

ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.