ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
TSK
TSK · ಯೆಶಾಯ 37:27
Treasury of Scripture Knowledge references in ಕನ್ನಡ IRV.
ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.
ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
¶ ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.