TSK

TSK · ಯೆಶಾಯ 37:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.

ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?

ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.

ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.

ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

¶ ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?

ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.

ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.

ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”

ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.

ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.