TSK

TSK · ಯೆಶಾಯ 37:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.

ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.

ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.

ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.

ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.