TSK

TSK · ಯೆಶಾಯ 37:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.

ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

¶ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

¶ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.

ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.