ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
TSK
TSK · ಯೆಶಾಯ 37:6
Treasury of Scripture Knowledge references in ಕನ್ನಡ IRV.
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.
‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
¶ ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, ‹“ಅಂಜಬೇಡ, ನಂಬಿಕೆ ಮಾತ್ರ ಇರಲಿ”› ಎಂದು ಹೇಳಿದನು.