ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
TSK
TSK · ಯೆಶಾಯ 37:7
Treasury of Scripture Knowledge references in ಕನ್ನಡ IRV.
ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.