TSK

TSK · ಯೆಶಾಯ 38:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?

ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.

‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›