¶ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
TSK
TSK · ಯೆಶಾಯ 38:3
Treasury of Scripture Knowledge references in ಕನ್ನಡ IRV.
ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು ‹“ಇಗೋ,›‹ಇವನು ನಿಜವಾದ ಇಸ್ರಾಯೇಲನು,›‹ಇವನಲ್ಲಿ ಕಪಟವಿಲ್ಲ”› ಎಂದು ಹೇಳಿದನು.
¶ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.