TSK

TSK · ಯೆಶಾಯ 38:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.

ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.

ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.

¶ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’

¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.

ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.

ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,

ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?

ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!

ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.

ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.