TSK

TSK · ಯೆಶಾಯ 4:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.

ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.

ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

¶ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.

“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.

ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.