TSK

TSK · ಯೆಶಾಯ 4:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;

ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.

¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”

ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.

ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.

‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.›

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.