TSK

TSK · ಯೆಶಾಯ 4:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.

ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

¶ “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

‹ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ”› ಎಂದು ಹೇಳಿದನು.

ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.

ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.

¶ ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

‹ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.›‹ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,›‹ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.›

ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.