TSK

TSK · ಯೆಶಾಯ 40:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.

ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.

ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.

ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,

‹ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು›‹ಕಡೆಯವರೆಗೂ ನಡಿಸುತ್ತಾನೋ,›‹ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.›‹‘ಅವನು›‹ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,›‹ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ›‹ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.›

¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.

¶ ‹“ನೋಡು! ನಾನು ಬೇಗನೇ ಬರುತ್ತೇನೆ.›‹ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ›‹ಪ್ರತಿಫಲವು ನನ್ನಲ್ಲಿದೆ.›