ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
TSK
TSK · ಯೆಶಾಯ 40:2
Treasury of Scripture Knowledge references in ಕನ್ನಡ IRV.
¶ ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.
ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;
¶ ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.
ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.
ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.
ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
ಆತನು ಅವರಿಗೆ, ‹“ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.›
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.