TSK

TSK · ಯೆಶಾಯ 40:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.

ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.

“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!

ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?

ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.