ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.
TSK
TSK · ಯೆಶಾಯ 40:23
Treasury of Scripture Knowledge references in ಕನ್ನಡ IRV.
ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
¶ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.