ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
TSK
TSK · ಯೆಶಾಯ 40:24
Treasury of Scripture Knowledge references in ಕನ್ನಡ IRV.
ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.
ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.
ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?
ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.
ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.