TSK

TSK · ಯೆಶಾಯ 40:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.

ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.

¶ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.

ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.

ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.

ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.