¶ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.
TSK
TSK · ಯೆಶಾಯ 41:11
Treasury of Scripture Knowledge references in ಕನ್ನಡ IRV.
ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.