ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
TSK
TSK · ಯೆಶಾಯ 41:18
Treasury of Scripture Knowledge references in ಕನ್ನಡ IRV.
ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
¶ ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.
¶ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,