¶ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
TSK
TSK · ಯೆಶಾಯ 41:2
Treasury of Scripture Knowledge references in ಕನ್ನಡ IRV.
¶ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.
ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
¶ ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.