TSK

TSK · ಯೆಶಾಯ 41:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.

ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.

ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.

ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು

ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.

ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.

ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ

ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.

“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

¶ ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.