ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
TSK
TSK · ಯೆಶಾಯ 42:20
Treasury of Scripture Knowledge references in ಕನ್ನಡ IRV.
¶ ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
ಯೇಸು, ‹“ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು”› ಎಂದು ಹೇಳಿದಾಗ,
ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.