TSK

TSK · ಯೆಶಾಯ 42:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.

ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.

ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

ಆತನು ಕೈಬತ್ತಿದ್ದವನಿಗೆ, ‹“ಎದ್ದು ನಡುವೆ ನಿಂತುಕೋ”› ಎಂದು ಹೇಳಿದನು.