ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
TSK
TSK · ಯೆಶಾಯ 42:6
Treasury of Scripture Knowledge references in ಕನ್ನಡ IRV.
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.
ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.
ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
¶ ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.