ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
TSK
TSK · ಯೆಶಾಯ 44:17
Treasury of Scripture Knowledge references in ಕನ್ನಡ IRV.
ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
¶ ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.