ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
TSK
TSK · ಯೆಶಾಯ 44:20
Treasury of Scripture Knowledge references in ಕನ್ನಡ IRV.
ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,
ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
‹ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.›
ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.