TSK

TSK · ಯೆಶಾಯ 44:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.

¶ ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.

¶ ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.

ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.

ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.

ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,

ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.

ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.

ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.

ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.

¶ ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.

ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.

ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.

ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.

“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.

¶ ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.

‹ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು”› ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.