ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.
TSK
TSK · ಯೆಶಾಯ 45:11
Treasury of Scripture Knowledge references in ಕನ್ನಡ IRV.
¶ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.
ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.