ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
TSK
TSK · ಯೆಶಾಯ 45:17
Treasury of Scripture Knowledge references in ಕನ್ನಡ IRV.
ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.
¶ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
‹ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು”› ಎಂದು ಹೇಳಿದನು.
ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.