¶ “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”
TSK
TSK · ಯೆಶಾಯ 45:19
Treasury of Scripture Knowledge references in ಕನ್ನಡ IRV.
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
¶ “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.