TSK

TSK · ಯೆಶಾಯ 45:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.

ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,

ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.

ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.

ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.

ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”

ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.

ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,