ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
TSK
TSK · ಯೆಶಾಯ 45:25
Treasury of Scripture Knowledge references in ಕನ್ನಡ IRV.
ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
¶ ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
¶ ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.