TSK

TSK · ಯೆಶಾಯ 46:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.

ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.

ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.

ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.

ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.

ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.