ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
TSK
TSK · ಯೆಶಾಯ 46:12
Treasury of Scripture Knowledge references in ಕನ್ನಡ IRV.
ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?
ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.