ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
TSK
TSK · ಯೆಶಾಯ 47:1
Treasury of Scripture Knowledge references in ಕನ್ನಡ IRV.
ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
¶ ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
¶ ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!
ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
¶ ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.
ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.
ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.
ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
¶ ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.