TSK

TSK · ಯೆಶಾಯ 47:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.

“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.

ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.

ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”

‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’