TSK

TSK · ಯೆಶಾಯ 49:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,

ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.

ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”

“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.

ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.