ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
TSK
TSK · ಯೆಶಾಯ 49:2
Treasury of Scripture Knowledge references in ಕನ್ನಡ IRV.
ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
ಆ ಮೇಲೆ ಯೇಸು, ‹“ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ”› ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.