TSK

TSK · ಯೆಶಾಯ 49:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.

ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.

¶ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.

¶ ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.

ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.

ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.

ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.

ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.

ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.

ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.

ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.

“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.

‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›