TSK

TSK · ಯೆಶಾಯ 49:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.

ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ

ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.

ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.

ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.

ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.

ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, ‹“ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.›

“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.