TSK

TSK · ಯೆಶಾಯ 5:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.

ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.

¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›

‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›

ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.