ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
TSK
TSK · ಯೆಶಾಯ 5:16
Treasury of Scripture Knowledge references in ಕನ್ನಡ IRV.
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.
¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.